ಶ್ರವಣಬೆಳಗೊಳ
From Wikipedia
ಶ್ರವಣ ಬೆಳಗೊಳ ಹಾಸನ ಜಿಲ್ಲೆಯ ಐತಿಹಾಸಿಕ ಧಾರ್ಮಿಕ, ಪ್ರವಾಸಿ ತಾಣ. ಶವಣ ಬೆಳಗೊಳದಲ್ಲಿ ವಿಶ್ವವಿಖ್ಯಾತ ೫೮ ಅಡಿ ಎತ್ತರದ ಬಾಹುಬಲಿಯ ಮೂರ್ತಿಯಿರುವುದು. ಜೈನರ ಧಾರ್ಮಿಕ ಗುಡಿಯಾದರೂ, ಇತೆರೆ ಹಲವರು ಕೂಡ ಬಂದು ಪೂಜೆ ಸಲ್ಲಿಸುತ್ತಾರೆ.
ಏಷ್ಯ ಖಂಡದಲ್ಲಿಯೇ ಅತಿ ಎತ್ತರದ(೧೭ ಮೀಟರ್) ಗೊಮ್ಮಟನ ಶಿಲೆಯಿರುವ ಶ್ರವಣಬೆಳಗೊಳ ಪ್ರಸಿದ್ಧ ಜೈನ ಪುಣ್ಯಕ್ಷೇತ್ರ. ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲ್ಲೂಕಿನ ಹೋಬಳಿ ಕೇಂದ್ರವು ಬೆಂಗಳೂರಿನಿಂದ ೧೪೫ ಕಿ.ಮೀಗಳ ದೂರದಲ್ಲಿದೆ.